ಮಂಗಳವಾರ, ಜನವರಿ 19, 2010

'ಪಂಚರಂಗಿ' ಗಿಳಿ ಹಾರಿಬಿಟ್ಟ ಯೋಗರಾಜ ಭಟ್

ಚಿತ್ರ ನಿರ್ದೇಶಕ ಯೋಗರಾಜ್ ಭಟ್ ತಮ್ಮ ಚೊಚ್ಚಲ ನಿರ್ಮಾಣದ ಚಿತ್ರಕ್ಕೆ 'ಪಂಚರಂಗಿ'ಎಂದುಹೆಸರಿಟ್ಟಿದ್ದಾರೆ. ಪಂಚರಂಗಿ ಎಂದರೆ ಐದು ಬಣ್ಣಗಳು ಎಂದು ಅರ್ಥ ಬರುತ್ತದೆ. ಐದು ಬಣ್ಣಗಳ ಪ್ರತೀಕವೇ 'ಪಂಚರಂಗಿ' ಚಿತ್ರ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಈ ಐದು ಬಣ್ಣಗಳು ಭಟ್ಟರ ದೃಷ್ಟಿಕೋನದಲ್ಲಿ ಭಿನ್ನವಾಗಿವೆ. ವಿದ್ಯೆ, ಉದ್ಯೋಗ, ಪ್ರೀತಿ, ಪಾಲಕರು ಹಾಗೂ ಮದುವೆ...ಇವು ಭಟ್ಟರ ಕಲ್ಪನೆಯ ಪಂಚರಂಗುಗಳು. ಈ ಐದು ಬಣ್ಣಗಳನ್ನು ಬೆಸೆಯುವ ಕಾರ್ಯ ಫೆಬ್ರವರಿ 3ರಿಂದ ಆರಂಭವಾಗಲಿದೆ. ಚಿತ್ರೀಕರಣ ಬೆಂಗಳೂರು, ಕರಾವಳಿ ಪ್ರದೇಶದ ರಮಣೀಯ ಪ್ರದೇಶಗಳಲ್ಲಿ ಸಾಗಲಿದೆ.

ಚಿತ್ರದ ಕತೆಗೆ ರಮಣೀಯ ದೃಶ್ಯಗಳು ಹೆಚ್ಚು ಸೂಕ್ತ. ಹಾಗಾಗಿ ಈ ಬಾರಿ ಭಟ್ಟರ ಪಯಣ ಕೊಡಗಿನಿಂದ ಕರಾವಳಿ ಕಡೆಗೆ ಸಾಗಲಿದೆಯಂತೆ. ''ಮನುಷ್ಯ ತನ್ನ ಆಸೆಗಳನ್ನು ಐದು ಅಂಶಗಳ ಮೂಲಕವೇ ಪೂರೈಸಿಕೊಳ್ಳಬೇಕ'' ಎಂಬುದು ಚಿತ್ರದ ಒನ್ ಲೈನ್ ಕತೆ.

ಪಂಚರಂಗಿಯ ನಾಯಕ ದಿಗಂತ್. ಕೊಡಗಿನ ಬೆಡಗಿ ನಿಧಿ ಸುಬ್ಬಯ್ಯ ಚಿತ್ರದ ನಾಯಕಿ. ಭಟ್ಟರ ಜೊತೆ 'ಮುಂಗಾರು ಮಳೆ' ಹಾಗೂ 'ಮನಸಾರೆ' ಚಿತ್ರಗಳಿಗೆ ಕೆಲಸ ಮಾಡಿದ್ದ ಮನೋಮೂರ್ತಿ ಚಿತ್ರದ ಸಂಗೀತ ನಿರ್ದೇಶಕರು. ಛಾಯಾಗ್ರಾಹಣದ ಜಬಾಬ್ದಾರಿಯನ್ನು ತ್ಯಾಗು ಅವರಿಗೆ ವಹಿಸಿದ್ದಾರೆ

ತೆಲುಗಿನ 'ಕಿಕ್' ಕನ್ನಡಕ್ಕೆ ತರುತ್ತಿದ್ದಾರೆ ಸುದೀಪ್

ಸಂವೇದಾನಾಶೀಲ ನಟ ಸುದೀಪ್ ಸಿನಿಮಾ ವೃತ್ತಿ ಜೀವನದ ಗ್ರಾಫ್ ಏರುಗತಿಯಲ್ಲಿ ಸಾಗುತ್ತಿದೆ. ಕನ್ನಡ ಮತ್ತು ಹಿಂದಿ ಚಿತ್ರರಂಗದಲ್ಲಿ ಸುದೀಪ್ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಬಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ 'ರಣ್' ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ರಾಮ್ ಗೋಪಾಲ್ ವರ್ಮಾರ ತೆಲುಗಿನ 'ರಕ್ತ ಚರಿತ್ರ' ಚಿತ್ರದಲ್ಲೂ ಸುದೀಪ್ ಅಭಿನಯಿಸುತ್ತಿದ್ದಾರೆ. ಈಗ ತೆಲುಗಿನ ಮತ್ತೊಂದು ಸೂಪರ್ ಹಿಟ್ ಚಿತ್ರ 'ಕಿಕ್'ನ್ನು ಕನ್ನಡಕ್ಕೆ ರೀಮೇಕ್ ಮಾಡಲು ಸುದೀಪ್ ಸಿದ್ಧತೆ ನಡೆಸಿದ್ದಾರೆ. ತೆಲುಗಿನಲ್ಲಿ ರವಿತೇಜ ನಟಿಸಿದ್ದ ಭಿನ್ನ ಕಥಾಹಂದರದ 'ಕಿಕ್'ಚಿತ್ರ ತನ್ನ ವಿಭಿನ್ನ ನಿರೂಪಣೆಯಿಂದ ಪ್ರೇಕ್ಷಕರನ್ನು ರಂಜಿಸಿತ್ತು.

ಇದೀಗ ಅದೇ 'ಕಿಕ್'ನಲ್ಲಿ ಸುದೀಪ್ ಈ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಈ ಹಿಂದೆ ರವಿತೇಜ ನಟಿಸಿದ್ದ 'ವಿಕ್ರಮಾರ್ಕುಡು' ಚಿತ್ರ ಕನ್ನಡಕ್ಕೆ 'ಈ ಶತಮಾನದ ವೀರ ಮದಕರಿ'ಯಾಗಿ ರೀಮೇಕ್ ಆಗಿತ್ತು. ದರ್ಶನ್ ರ'ಪೊರ್ಕಿ' ಚಿತ್ರದಲ್ಲಿ ನಟಿಸುತ್ತಿರುವ ಪ್ರಣೀತಾ ಚಿತ್ರದ ನಾಯಕಿ ಎಂಬುದು ಸದ್ಯದ ಸುದ್ದಿ.

ಕಾಮೆಂಟ್‌ಗಳಿಲ್ಲ: